ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. 1999ನೇ ವರ್ಷದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಐಕಳ ಗುಣಪಾಲ ಶೆಟ್ಟಿ ಹಾಗೂ ಕುಟುಂಬದವರಿಂದ ನಿರ್ಮಿಸಲ್ಪಟ್ಟು ದೇವಸ್ಥಾನಕ್ಕೆ ಸಮರ್ಪಿಸಲಾದ ಈ ಸ್ವಾಗತ ಗೋಪುರವನ್ನು ತೆರವುಗೊಳಿಸುವ ಅಥವಾ ಸುರಕ್ಷಿತವಾಗಿ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ. ಟ್ರಸ್ಟಿ ಹಾಗೂ ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ಸಲಹೆಯಂತೆ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಅಧ್ಯಕ್ಷರಾದ ಜೀವನ್ ಕೆ ಶೆಟ್ಟಿ ಅವರ ಸಹಕಾರದಲ್ಲಿ ಹರಿಯಾಣದ ವಿಶೇಷ ಪರಿಣತಿ ಹೊಂದಿದ ತಾಂತ್ರಿಕ ಸಂಸ್ಥೆಯೊಂದು ಸ್ಥಳಕ್ಕೆ ಭೇಟಿ ನೀಡಿ ಗೋಪುರದ ಸಮಗ್ರ ಪರಿಶೀಲನೆ ನಡೆಸಿತು. ಗೋಪುರವನ್ನು ಹಾನಿಯಾಗದಂತೆ ಸ್ಥಳಾಂತರಿಸುವ ತಾಂತ್ರಿಕ ಸಾಧ್ಯತೆಗಳ ಬಗ್ಗೆ ತಜ್ಞರು ಚರ್ಚಿಸಿದರು.
ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ವಾಗತ ಗೋಪುರವನ್ನು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 66ರ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವ ಕುರಿತು ಮಹತ್ವದ ಪರಿಶೀಲನಾ ಸಭೆ ನಡೆಯಿತು. 1999ನೇ ವರ್ಷದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಐಕಳ ಗುಣಪಾಲ ಶೆಟ್ಟಿ ಹಾಗೂ ಕುಟುಂಬದವರಿಂದ ನಿರ್ಮಿಸಲ್ಪಟ್ಟು ದೇವಸ್ಥಾನಕ್ಕೆ ಸಮರ್ಪಿಸಲಾದ ಈ ಸ್ವಾಗತ ಗೋಪುರವನ್ನು ತೆರವುಗೊಳಿಸುವ ಅಥವಾ ಸುರಕ್ಷಿತವಾಗಿ ಸ್ಥಳಾಂತರಿಸುವ ಅಗತ್ಯ ಎದುರಾಗಿದೆ. ಟ್ರಸ್ಟಿ ಹಾಗೂ ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ಸಲಹೆಯಂತೆ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿಯ ಅಧ್ಯಕ್ಷರಾದ ಜೀವನ್ ಕೆ ಶೆಟ್ಟಿ ಅವರ ಸಹಕಾರದಲ್ಲಿ ಹರಿಯಾಣದ ವಿಶೇಷ ಪರಿಣತಿ ಹೊಂದಿದ ತಾಂತ್ರಿಕ ಸಂಸ್ಥೆಯೊಂದು ಸ್ಥಳಕ್ಕೆ ಭೇಟಿ ನೀಡಿ ಗೋಪುರದ ಸಮಗ್ರ ಪರಿಶೀಲನೆ ನಡೆಸಿತು. ಗೋಪುರವನ್ನು ಹಾನಿಯಾಗದಂತೆ ಸ್ಥಳಾಂತರಿಸುವ ತಾಂತ್ರಿಕ ಸಾಧ್ಯತೆಗಳ ಬಗ್ಗೆ ತಜ್ಞರು ಚರ್ಚಿಸಿದರು.
